*ಜಿಲ್ಲೆಯ ಅಭಿವೃದ್ಧಿಗೆ ಸಹಕಾರ ನೀಡಿ; ಸರಕಾರಿ ಯೋಜನೆಗಳ ಸಂಪೂರ್ಣ ಲಾಭ ಬಡವರಿಗೆ, ಅರ್ಹರಿಗೆ ಮುಟ್ಟಬೇಕು; ಜಿಲ್ಲೆಯಲ್ಲಿ ಪಂಚ ಗ್ಯಾರಂಟಿಗಳಿಗೆ ಫಲನುಭವಿಗಳಿಂದ ಉತ್ತಮ ಸ್ಪಂದನೆ: ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ*
ಧಾರವಾಡ (ಕ.ವಾ) ಆ.15: ಜಿಲ್ಲೆಯ ಅಭಿವೃದ್ಧಿಗೆ ಎಲ್ಲರೂ ಸಹಕಾರ ನೀಡಬೇಕು. ಸರಕಾರದ ಎಲ್ಲ ಜನ ಕಲ್ಯಾಣ ಕಾರ್ಯಕ್ರಮಗಳು ಬಡವರಿಗೆ , ಅರ್ಹರಿಗೆ ತಲುಪಿಸುವಲ್ಲಿ ಎಲ್ಲರ ಪಾತ್ರ ಮುಖ್ಯವಾಗಿದೆ. ರಾಜ್ಯ ಸರಕಾರದ ಜನಪರ ಯೋಜನೆಗಳು ಜಿಲ್ಲೆಯಲ್ಲಿ ಯಶಸ್ವಿಯಾಗಿ ಅನುಷ್ಠಾನಗೊಂಡಿದ್ದು, ಫಲಾನುಭವಿಗಳಿಂದ ಉತ್ತಮ ಸ್ಪಂದನೆ ಸಿಕ್ಕಿದೆ ಎಂದು ಕಾರ್ಮಿಕ ಇಲಾಖೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ ಅವರು ಹೇಳಿದರು.