DHARWAD:ರಾಜ್ಯಪಾಲರ ನಡೆಯನ್ನು ಖಂಡಿಸಿ -- ಕಾಂಗ್ರೆಸ್ ಬೃಹತ್ ಪ್ರತಿಭಟನೆ
ಧಾರವಾಡ:--- ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ನವರ ಬಗ್ಗೆ ಬಿಜೆಪಿ ನಾಯಕರು ಸುಖಾಸುಮ್ಮನೆ ಅವರ ಹೆಸರಿಗೆ ಮಸಿ ಬಳಿಯುವ ಪ್ರಯತ್ನದಿಂದ ಹಗರಣವೇ ಅಲ್ಲದ ವಿಷಯವನ್ನು ಮುಡಾ ಹಗರಣ ಎಂದು ಬಿಂಬಿಸಿ ಮುಖ್ಯಮಂತ್ರಿಗಳ ರಾಜೀನಾಮೆಗೆ ಒತ್ತಾಯಿಸುತ್ತಿರುವುದನ್ನು ಹಾಗೂ ರಾಜ್ಯಪಾಲರನ್ನು ಬಳಸಿಕೊಂಡು ಅವರ ಮೂಲಕ ಮುಖ್ಯಮಂತ್ರಿಗಳಿಗೆ ನೋಟಿಸ್ ಕೊಟ್ಟಿರುವದನ್ನು ಖಂಡಿಸಿ ಹುಬ್ಬಳ್ಳಿ ಧಾರವಾಡ ಮಹಾನಗರ ಜಿಲ್ಲಾ ಕಾಂಗ್ರೆಸ್ ಹಾಗೂ ಕಾಂಗ್ರೇಸ್ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಹಯೋಗದೊಂದಿಗೆ ಇಂದು ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಅವರಿಗೆ ಮನವಿ ಅಪಿ೯ಸಿದರು