*ಜಿ.ಪಂ.ಸಿಇಓ ಆಗಿ ಭುವನೇಶ ಪಾಟೀಲ ಅಧಿಕಾರ ಸ್ವೀಕಾರ*
ಧಾರವಾಡ (ಕರ್ನಾಟಕ ವಾರ್ತೆ) ಜ.25: ಧಾರವಾಡ ಜಿಲ್ಲಾ ಪಂಚಾಯತ ನೂತನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಐಎಎಸ್ ಅಧಿಕಾರಿ ಭುವನೇಶ ದೇವಿದಾಸ ಪಾಟೀಲ ಅವರು ಇಂದು ಸಂಜೆ ಅಧಿಕಾರ ಸ್ವೀಕರಿಸಿದರು.
ಜಿಲ್ಲಾ ಪಂಚಾಯತ ಪ್ರಭಾರಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆಗಿರುವ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರಿಂದ ಸಿಇಓ ಹುದ್ದೆಯ ಅಧಿಕಾರ ವಹಿಸಿಕೊಂಡರು.
ಕಲಬುರ್ಗಿ ಮಹಾನಗರಪಾಲಿಕೆ ಆಯುಕ್ತರಾಗಿ ಸೇವೆ ಸಲ್ಲಿಸುತ್ತಿದ್ದ ಇವರನ್ನು ಸರಕಾರ ಧಾರವಾಡ ಜಿಲ್ಲಾ ಪಂಚಾಯತ ಸಿಇಓ ಹುದ್ದೆಗೆ ವರ್ಗಾಯಿಸಿ, ನಿನ್ನೆ ಆದೇಶ ಮಾಡಿತ್ತು.