13 ಕ್ಕೆ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ ಹಾಗೂ ವೈವಿಧ್ಯಮಯ ಕಾರ್ಯಕ್ರಮ.
ಧಾರವಾಡ 12 :
ಧಾರವಾಡವು ಕಲಾಲೋಕದಲ್ಲಿ ಒಂದು ಪುಟ್ಟ ಹೆಜ್ಜೆ ಎಂಬ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ ಹಾಗೂ ವೈವಿಧ್ಯಮಯ ಕಾರ್ಯಕ್ರಮವನ್ನು
ದಿ 13 ರಂದು ಸಂಜೆ 5:00 ಗಂಟೆಗೆ ಸಾಂಸ್ಕೃತಿಕ ಸುವರ್ಣ ಸಮುಚ್ಚಯ ಭವನ ರಂಗಾಯಣದಲ್ಲಿ ಹಮ್ಮಿಕೊಳ್ಳಾಗಿದೆ ಎಂದು ಮಾರ್ತಾಂಡಪ್ಪ ಕತ್ತಿ ತಿಳಸಿದರು. ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು
ಕಾರ್ಯಕ್ರಮದ
ಉದ್ಘಾಟನೆಯನ್ನು ಧಾರವಾಡ
ರಂಗಾಯಣದ ನಿರ್ದೇಶಕರಾದ ಡಾ. ರಾಜು ತಾಳಿಕೋಟಿ ಮಾಡಲಿದ್ದು ಅಧ್ಯಕ್ಷತೆಯನ್ನು
ಸಾಹಿತಿಗಳು ಹಾಗೂ ಸಂಘಟಕರಾದ ಮಾರ್ತಾಂಡಪ್ಪ ಕತ್ತಿ ವಹಿಸಲಿದ್ದಾರೆ, ಮುಖ್ಯ ಅತಿಥಿಗಳಾಗಿ ನವಲೂರು ಸರ್ಕಾರಿ ಪದವಿಪೂರ್ವ ಕಾಲೇಜಿನ ಉಪನ್ಯಾಸಕರಾದ ನಾಗರಾಜ ಡಿ.ಎಲ್,ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಸದ್ಯಸರಾದ
ಮಂಜುನಾಥ ಭಟ್ರೆನವರ ಆಗಮಿಸುವರು. ಕಾರ್ಯಕ್ರಮದಲ್ಲಿ
ಕಲಾಶಕ್ತಿ ಫೌಂಡೇಶನ್ ಅಧ್ಯಕ್ಷರಾದ ಅನ್ನಪೂರ್ಣ ಜಿ ಪಾಟೀಲ್
ಉಪಸ್ಥಿತರಿರುವರು. ಮಾತೃ ಭೂಮಿ ಸೇವಾ ಸಂಘ ಧಾರವಾಡದ ಅಧ್ಯಕ್ಷರಾದ ನಿತಿನ್ ರಾಮದುರ್ಗ ಹಾಗೂ ಸಮಾಜ ಸೇವಕರಾದ ಶ್ರೀಕಾಂತ ಪುರ್ಲಿ ಅವರನ್ನು ಸನ್ಮಾನಿಸಲಾಗುವುದು.
ನಂತರ ಶಿಬಿರದ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದರು
ಈ ಪತ್ರಿಕಾಗೋಷ್ಠಿಯಲ್ಲಿ ಕಲಾಶಕ್ತಿ ಫೌಂಡೇಶನ್ ಅಧ್ಯಕ್ಷ ಅನ್ನಪೂರ್ಣಾ ಪಾಟೀಲ, ಮಲ್ಲನಗೌಡ ಪಾಟೀಲ, ಇದ್ದರು.